ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಜೆಸಿಐ ಕೋಟ ಬ್ರಿಗೇಡಿಯರ್ ವತಿಯಿಂದ, ಸಕಾಲದಲ್ಲಿ ಮಳೆ ಬಾರದ ಹಿನ್ನೆಲೆ ಮಳೆ ಮತ್ತು ಬೆಳೆ ಉತ್ತಮವಾಗಿರಲು ಮತ್ತು ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನ ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ಸಭಾಂಗಣದಲ್ಲಿ ಇದೇ ಜೂನ್ ೨೧ ರಂದು ಜರುಗಲಿದ್ದು, ಬೆಳಿಗ್ಗೆ ೯ ಗಂಟೆಗೆ ಸರಿಯಾಗಿ ಪೂಜೆ ಕಾರ್ಯ ಆರಂಭವಾಗಲಿರುವುದು.

ಈ ವಿಶೇಷ ಸಂದರ್ಭದಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಈ ದೇವತಾ ಕಾರ್ಯಕ್ಕೆ ಅತೀ ಹೆಚ್ಚು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕಾಗಿ ಜೆಸಿಐ ಕೋಟ ಬ್ರಿಗೇಡ್‌ನ ಅಧ್ಯಕ್ಷರಾದ ಜೆಸಿ ಶೇಷಗಿರಿನಾಯಕ್ ಸಾಲಿಗ್ರಾಮ ಅವರು ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!