ಕರ್ನಾಟಕ ರಾಜ್ಯ ಹಾಲು ಮಹಾಮಂಡಳಿ ನಿರ್ದೇಶಕರಾಗಿ ಕಾಪು ದಿವಾಕರ ಶೆಟ್ಟಿ ಆಯ್ಕೆ

ಕಾಪು ಕರ್ನಾಟಕ ರಾಜ್ಯ ಹಾಲು ಮಹಾಮಂಡಳಿ ಬೆಂಗಳೂರು ಇದರ ನಿರ್ದೇಶಕರಾಗಿ ಕೆಎಂಎಫ್ ಮಂಗಳೂರು ಡೈರಿಯ ಮಾಜಿ ಅಧ್ಯಕ್ಷ ಕಾಪು ದಿವಾಕರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರಿ ಹಾಲು ಮಹಾ ಮಂಡಳಿಯ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ರಚನೆಗಾಗಿ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಪ್ರತಿನಿಧಿಯಾಗಿ ಸ್ಪರ್ಧಿಸಿದ ಕಾಪು ದಿವಾಕರ ಶೆಟ್ಟಿ ರಾಜ್ಯ ಹಾಲು ಮಹಾಮಂಡಳಿ ನಿರ್ದೇಶಕರಾಗಿ ಆಯ್ಕೆಯಾದರು.

ಕಾಪು ದಿವಾಕರ ಶೆಟ್ಟಿ ಕೆಎಂಎಫ್ ಮಂಗಳೂರು ಡೈರಿಯ ಮಾಜಿ ಅಧ್ಯಕ್ಷರಾಗಿದ್ದು, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉಳಿಯಾರಗೋಳಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾಗಿರುವ ಇವರು ಕಾಪು ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾಪು ದಿವಾಕರ ಶೆಟ್ಟಿ ಪ್ರಸ್ತುತ ಕಾಪು ಸಿಎ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!