ಕಾರ್ಕಳ: ತಾ.ಪಂ ಅಧ್ಯಕ್ಷೆ ಸೌಭಾಗ್ಯ, ಉಪಾಧ್ಯಕ್ಷ ಹರೀಶ್ ಅವಿರೋಧ ಆಯ್ಕೆ

ಕಾರ್ಕಳ: ತಾಲೂಕು ಪಂಚಾಯತ್‌ನಲ್ಲಿ ತೆರವುಗೊಂಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಮಧ್ಯಾಹ್ನ ಚುನಾವಣೆ ನಡೆದಿದ್ದು, ಮಾಳ ತಾ.ಪಂ ಕ್ಷೇತ್ರದ ಸದಸ್ಯೆ ಸೌಭಾಗ್ಯ ಮಡಿವಾಳ ಅಧ್ಯಕ್ಷರಾಗಿ, ಅಜೆಕಾರು ತಾ.ಪಂ ಕ್ಷೇತ್ರದ ಸದಸ್ಯರಾದ ಹರೀಶ್ ನಾಯಕ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ತಾ.ಪಂ ನಲ್ಲಿ ಒಟ್ಟು20 ಸ್ಥಾನಗಳಿದ್ದು, ಓರ್ವ ಕಾಂಗ್ರೆಸ್ ಸದಸ್ಯ ಹಾಗೂ 19ಮಂದಿ ಬಿಜೆಪಿ ಸದಸ್ಯ ಬಲವಿದೆ.ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ಮಡಿವಾಳ, ಉಪಾಧ್ಯಕ್ಷ ಸ್ಥಾನಕ್ಕೆ ಹರೀಶ್ ನಾಯಕ್ ಇವರು ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಅವರಿಬ್ಬರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಕುಂದಾಪುರ ಸಹಾಯಕ ಕಮಿಷನರ್ ಕೆ.ರಾಜು ಘೋಷಿಸಿದರು.

ಕುಂದಾಪುರ ಸಹಾಯಕ ಕಮಿಷನರ್ ಕೆ.ರಾಜು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮೇಜರ್ ಡಾ.ಹರ್ಷ ಕೆ.ಬಿ ಅವರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯರುಗಳು, ಹಿತೈಷಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು,ಬಿಜೆಪಿ ಕಾರ್ಯಕರ್ತರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದಿಸಿದರು.

Leave a Reply

Your email address will not be published. Required fields are marked *

error: Content is protected !!