ಕಡೆಕಾರು: ಕೊಳ ಫ್ರೆಂಡ್ಸ್ ಆಶ್ರಯದಲ್ಲಿ ನೇತ್ರ ತಪಾಸಣಾ ಶಿಬಿರ

ಉಡುಪಿ :ಕೊಳ ಫ್ರೆಂಡ್ಸ್  ಕಡೆಕಾರ್, ಚೈತನ್ಯ ಸೋಶಿಯಲ್ ವೆಲ್ಫೇರ್ ಫೌಂಡೇಶನ್ , ಲಯನ್ಸ್ ಕ್ಲಬ್ ಉಡುಪಿ ರಾಯಲ್ ಮತ್ತು ಸಂಚಾರಿ ನೇತ್ರ ಘಟಕ ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಕಡೆಕಾರಿನಲ್ಲಿ ನೇತ್ರ ತಪಾಸಣಾ ಶಿಬಿರ ಜರಗಿತು.
ಜಿಲ್ಲಾ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ನಿತ್ಯಾನಂದ ನಾಯಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನೇತ್ರ ಆರೋಗ್ಯದ ಬಗ್ಗೆ ಮತ್ತು ಸರಕಾರಿ ಸೌಲಭ್ಯಗಳ  ಬಗ್ಗೆ ಮಾಹಿತಿ ನೀಡಿದರು
ಮುಖ್ಯ ಅತಿಥಿಯಾಗಿ ಚೈತನ್ಯ ಸೋಶಿಯಲ್ ವೆಲ್ಫೇರ್ ಫೌಂಡೇಶನ್ ನ ಪ್ರವರ್ತಕರಾದ ಸುನೀಲ್ ಸಾಲ್ಯಾನ್ ಕಡೆಕಾರ್, ಲಯನ್ಸ್ ಕ್ಲಬ್ ಉಡುಪಿ ರಾಯಲ್ ಅಧ್ಯಕ್ಷ ದಯಾನಂದ ಕೋಟ್ಯಾನ್, ಕಾರ್ಯದರ್ಶಿ ಡಾ ಸಂತೋಷ್ ಕುಮಾರ್ ಬೈಲೂರು, ಜಗನ್ನಾಥ್ ಕಡೆಕಾರ್, ವಿಜಯ ಸುವರ್ಣ, ರಾಜೇಶ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು
ಕೊಳ ಫ್ರೆಂಡ್ಸ್ ನ ಉಪಾಧ್ಯಕ್ಷ ಆನಂದ ಕೋಟ್ಯಾನ್ ಸ್ವಾಗತಿಸಿದರು. ಚೇತನ್ ಸುವರ್ಣ ನಿರೂಪಿಸಿದರು

Leave a Reply

Your email address will not be published. Required fields are marked *

error: Content is protected !!