ಕೊರೋನಾ : ಜಿಲ್ಲಾ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾಗಿ ಯು.ಆರ್. ಸಭಾಪತಿ ನೇಮಕ

ಬೆಂಗಳೂರು : ಕೊರೋನಾ ಮಹಾಮಾರಿ ದೇಶದ ವಿವಿಧ ಭಾಗದಲ್ಲಿ ವಿಸ್ತರಿಸಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ದೇಶವನ್ನು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಗೂಲಿ ನೌಕರರು ಮತ್ತು ಬಡ ಜನರು ಸಂಕಷ್ಟದಲ್ಲಿದ್ದು, ವಿವಿಧ ಸಂಘಟನೆಗಳು, ಸಮಾಜ ಸೇವಕರು  ಕಷ್ಟದಲ್ಲಿರುವವರಿಗೆ ಊಟದ ಮತ್ತು  ದಿನಸಿ ವಸ್ತು ಹಾಗೂ ಔಷಧಿ ವಿತರಣೆ ಮಾಡುತ್ತಿದ್ದಾರೆ.

ಇವೆಲ್ಲದರ ನಡುವೆ ದಿನಗೂಲಿ ನೌಕರರು ಮತ್ತು ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ಚಾಚಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾಗಿ ಮಾಜಿ ಶಾಸಕ ಯು.ಆರ್. ಸಭಾಪತಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಿಸಿದ್ದಾರೆ.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಸಹಕಾರದೊಂದಿಗೆ, ಟಾಸ್ಕ್ ಫೋರ್ಸ್ ಸಮಿತಿಯು ಕೆಲಸ ಮಾಡಬೇಕಾಗಿದ್ದು, ಉಡುಪಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿರುವ ದಿನಗೂಲಿ ನೌಕರರು, ಬಡ ಕುಟುಂಬಗಳಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಲು ಈ ಸಮಿತಿ ರಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!