ಕುದ್ರೋಳಿ ದೇವಸ್ಥಾನಕ್ಕೆ‌ ಕಾಲಿಡಲ್ಲ‌ ಎಂದು ಶಪಥ: ದೇವರಲ್ಲಿ ಕ್ಷಮೆ ಕೊರಿದ ಪೂಜಾರಿ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಇಂದು ಸಂಜೆ ಮಾಜಿ ಕೇಂದ್ರ ಸಚಿವ ಹಾಗೂ ಮಂಗಳೂರು ದಸರಾ ರೂವಾರಿ ಜನಾರ್ಧನ ಪೂಜಾರಿ ಭೇಟಿ ನೀಡಿ ದೇವರ ದರ್ಶನ ಪಡೆದರು .ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು .

ಗೋಕರ್ಣನಾಥ ದೇವರ ಮುಂದೆ ನಿಂತು ಮಾತನಾಡಿದ ಜನಾರ್ಧನ ಪೂಜಾರಿ ನಾನು ತಪ್ಪು ಮಾಡಿದ್ದೇನೆ ನನ್ನನ್ನು ಕ್ಷಮಿಸಿ ಎಂದು ಮೊರೆಯಿಟ್ಟರು.

ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗೆಲ್ಲದಿದ್ದರೆ ನಾನು ಕುದ್ರೋಳಿ ಗೋಕರ್ಣನಾಥ ದೇವಾಲಯ ಮಸೀದಿ ಚರ್ಚ ಗಳಿಗೆ ಹೋಗುವುದಿಲ್ಲ ಎಂದು ಜನಾರ್ಧನ ಪೂಜಾರಿ ಘೋಷಣೆ ಮಾಡಿದ್ದರು .

ಆದರೆ ಇಂದು ಜನಾರ್ಧನ ಪೂಜಾರಿ ಕುದ್ರೋಳಿ ದೇವಸ್ಥಾನಕ್ಕೆ ಸುಮಾರು 3 ತಿಂಗಳ ಬಳಿಕ ಭೇಟಿ ನೀಡಿದ್ದಾರೆ .

Leave a Reply

Your email address will not be published. Required fields are marked *

error: Content is protected !!