ಅಡುಗೆ ಭಟ್ಟ ತನ್ನ ಪತ್ನಿ,ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೇರಿದ

ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ವೆಯಲ್ಲಿ ಪತಿಯು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು, ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ.


ಮೃತರನ್ನು ಸೂರ್ಯನಾರಾಯಣ ಭಟ್ (50) ಮಾನಸಿ (40) ಸುಧೀಂದ್ರ (14) ಸುಧೀಶ್ (8) ಎಂದು ಗುರುತಿಸಲಾಗಿದೆ. ಅಡುಗೆ ಕೆಲಸ ಮಾಡುತ್ತಿದ್ದ ಸೂರ್ಯನಾರಾಯಣ್ ಭಟ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಊಟದಲ್ಲಿ ವಿಷವಿಕ್ಕಿದ್ದಾನೆ ಎಂದು ತಿಳಿದು ಬಂದಿದೆ. ತಾನೂ ನೀಡಿದ ವಿಷದಿಂದ ತಕ್ಷಣ ಪ್ರಾಣ ಬಿಡದ ಹೆಂಡತಿ ಮಕ್ಕಳಿಗೆ ಕಬ್ಬಿಣದ ರಾಡ್‌ನಿಂದ ಯದ್ವತದ್ವ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೂವರು ಪ್ರಾಣಬಿಟ್ಟ ಬಳಿಕ ಸೂರ್ಯನಾರಾಯಣ ಭಟ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಗಂಡ-ಹೆಂಡತಿ ನಡುವಿನ ಕೌಟುಂಬಿಕ ಕಲಹವೇ ಘಟನೆಗೆ ಕಾರಣವಿರಬಹುದೆಂದು ಪೊಲೀಸ್ ಮೂಲಗಳು ತಿಳಿಸಿವೆ. .ಘಟನೆ ನಡೆದ ಮನೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಎಎಸ್ಪಿ ಹರಿರಾಮ್ ಶಂಕರ್, ಶಂಕರನಾರಾಯಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪೊಲೀಸ್ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!