ಶಾಸಕರಿಂದ ಸಚಿವ ಈಶ್ವರಪ್ಪ ಭೇಟಿ

ಬಂಟ್ವಾಳ:  ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್ ಸಚಿವ  ಕೆ.ಎಸ್. ಈಶ್ವರಪ್ಪ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬುಧವಾರ ಬೆಂಗಳೂರಿನಲ್ಲಿ ಬೇಟಿ ಮಾಡಿ ಕ್ಷೇತ್ರದ ವಿವಿಧ ಸಮಸ್ಯೆಗಳ ಬಗ್ಗೆ   ಗಮನ  ಸೆಳೆದರು.ಆಧಾರ್ ಕಾರ್ಡ್ ತಿದ್ದುಪಡಿಯ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ   ಗ್ರಾಮ ಪಂಚಾಯತ್ ಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿಯ ವ್ಯವಸ್ಥೆಯನ್ನು  ಜಾರಿಗೊಳಿಸುವಂತೆ ಮನವಿ ಮೂಲಕ ಒತ್ತಾಯಿಸಿದರು.ಹಾಗೆಯೇ ವಿವಿಧ ಅಭಿವೃದ್ದಿ ಕಾಮಗಾರಿಗಾಗಿ ಹೆಚ್ಚಿನ  ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.ಶಾಸಕರ ಮನವಿಗೆ  ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.ಈ ಸಂದರ್ಭ ದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ  ದೇವದಾಸ ಶೆಟ್ಟಿ,ಪುರಸಭಾ ಸದಸ್ಯ ಗೋವಿಂದ ಪ್ರಭು,ಬಿಜೆಪಿ ಮುಖಂಡ ಉದಯಕುಮಾರ್ ರಾವ್ ಬಂಟ್ವಾಳ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!