ಕರ್ನಾಟಕದ ಶಾಸಕರ ವಿರುದ್ಧ ಮಹಾರಾಷ್ಟ್ರದ ಯುವ ಕಾಂಗ್ರೆಸ್‌ ಪ್ರತಿಭಟನೆ

ಮುಂಬೈ: ರಾಜೀನಾಮೆ ನೀಡಿರುವ ಕರ್ನಾಟಕದ ಶಾಸಕರು ಉಳಿದುಕೊಂಡಿರುವ ಮುಂಬೈನ ಸೋಫಿಟೆಲ್‌ ಹೋಟೆಲ್‌ ಎದುರು ಮಹಾರಾಷ್ಟ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.‌ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. 

ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕರ್ನಾಟಕದ 13 ಮಂದಿ ಶಾಸಕರು ಶನಿವಾರ ಮುಂಬೈಗೆ ತೆರಳಿ ಅಲ್ಲಿನ ಸೋಫಿಟೆಲ್‌ ಹೋಟೆಲ್‌ನಲ್ಲಿ ಆಶ್ರಯ ಪಡೆದರು.

ಈ ಸಂಗತಿ ದೇಶಾದ್ಯಂತ ಸುದ್ದಿಯಾಗುತ್ತಲೇ ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ಸುರಾಜ್‌ ಸಿಂಗ್‌ ಠಾಕೂರ್‌ ಅವರ ನೇತೃತ್ವದಲ್ಲಿ ಹೊಟೇಲ್‌ ಬಳಿ ಜಮಾಯಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Leave a Reply

Your email address will not be published. Required fields are marked *

error: Content is protected !!