ದ.ಕ. ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢ: ಇದರಲ್ಲಿ ಓರ್ವರು ಉಡುಪಿಯವರು

ಮಂಗಳೂರು: ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಇದರಲ್ಲಿ ಓರ್ವರು ಉಡುಪಿಯ ಕಾರ್ಕಳದವರು ಎಂಬ ಮಾಹಿತಿ ಇದೆ.

ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಜಾಸ್ತಿಯಾಗುತ್ತಾನೆ ಇದೆ. ಹಾಗೇಯೇ ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹೊಸ ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ. ಇದರಲ್ಲಿ ಒಬ್ಬರು ದೆಹಲಿಯಲ್ಲಿ ನಡೆದ ಧಾರ್ಮಿಕರ ಸಭೆಯಲ್ಲಿ ಭಾಗವಹಿಸಿ ಬಂದಿದ್ದರು ಎಂದು ತಿಳಿದು ಬಂದಿದೆ.

ತೊಕ್ಕೊಟ್ಟು ಮೂಲದ ಆಟೋ ಚಾಲಕನೋರ್ವ ಇತ್ತೀಚೆಗೆ ದೆಹಲಿಯಲ್ಲಿ ನಡೆದ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚಾಲಕ ಇದ್ದ ವಸತಿ ಸಂಕೀರ್ಣವನ್ನು ಪೂರ್ತಿ ಲಾಕ್ ಡೌನ್ ಮಾಡಲು ಉಳ್ಳಾಲ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಜೊತೆಗೆ ಸ್ಥಳೀಯರಿಂದ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. 

Leave a Reply

Your email address will not be published. Required fields are marked *

error: Content is protected !!