ಅಕ್ರಮ ಗೋಸಾಗಟದ ವಿರುದ್ಧ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ

ಬೈಂದೂರು: ಅಕ್ರಮ ಗೋಸಾಗಟದ ವಿರುದ್ಧ ಬೈಂದೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಬೈಂದೂರಿನ ರೋಟರಿ ಭವನದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಗೋಹತ್ಯೆ ಹಾಗೂ ಅಕ್ರಮ ಗೋಸಾಗಟದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು.

 ಬೈಂದೂರು ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಧರ್ ಬೀಜೂರು ಮಾತನಾಡಿದ ಗೋಹತ್ಯೆ ನಿಯಂತ್ರಣಕ್ಕೆ ಜನಪ್ರತಿನಿಧಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯುದ್ದಕ್ಕೂ ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೆಣವ ಗೋಕಳ್ಳರನ್ನು ತರಾಟೆಗೆ ತೆಗೆದುಕೊಳ್ಳುವುದರ ಜೊತೆ ಎಚ್ಚರಿಕೆಯನ್ನು ನೀಡಿದರು.

ನೂರಾರು ಕಾರ್ಯಕರ್ತರು ಕಾಲ್ನೆಡಿಗೆಯಲ್ಲಿ ಬೈಂದೂರು ತಹಶೀಲ್ದಾರರ ಕಚೇರಿಗೆ ತೆರಳಿ ತಹಶೀಲ್ದಾರರಿಗೆ ಹಾಗೂ ಬೈಂದೂರು ಠಾಣಾಧಿಕಾರಿಗಳಿಗೆ ಲಿಖಿತ ಮನವಿ ನೀಡಿದರು.

ಈ ಸಂಧರ್ಭದಲ್ಲಿ ವಿಶ್ವ ಹಿಂದೂಪರಿಷತ್ ಮುಖಂಡರಾದ ದಿನೇಶ್ ಶೆಟ್ಟಿ ಹೆಬ್ರಿ, ಗಿರೀಶ್ ಕುಂದಾಪುರ, ಪ್ರಮೋದ್ ಶೆಟ್ಟಿ ಮಂದಾರ್ತಿ, ಸುರೇಂದ್ರ ಕೋಟೇಶ್ಚರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!