ನಳಿನ್ ಕುಮಾರ್ ಗೆ ಕನಿಷ್ಠ ಜ್ಞಾನವೂ, ರಾಜಕೀಯ ಜ್ಞಾನವೂ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು:  ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿಯವರುಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೋ ತಿಳಿಯುತ್ತಿಲ್ಲ. ಅವರಿಗೆ ಕನಿಷ್ಠ ಜ್ಞಾನವೂ,  ರಾಜಕೀಯ ಜ್ಞಾನವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಡಿಕೆ ಶಿವಕುಮಾರ್ ಜೈಲಿಗೆ ಹೋಗಲು ಸಿದ್ದರಾಮಯ್ಯ ಕಾರಣ ಅನ್ನೋ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ತಿರುಗೇಟು ನೀಡಿದರು. ನಳಿನ್ ಕುಮಾರ್ ಗೆ ಕನಿಷ್ಠ ಜ್ಞಾನ ಇಲ್ಲ. ಇಡಿ, ಐಟಿ, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತದೆ. ಈಗ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇದೆ. ಬಿಜೆಪಿಯವರು ಇಂತಹ ಹೇಳಿಕೆ ಕೊಟ್ಟು ರಾಜಕೀಯವಾಗಿ ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯವರು ಯಾಕೆ ನಳಿನ್ ಕುಮಾರ್ ನನ್ನ ಅಧ್ಯಕ್ಷ ಮಾಡಿದ್ದಾರೋ ಗೊತ್ತಿಲ್ಲ. ಕನಿಷ್ಠ ಜ್ಞಾನ ಇಲ್ಲದ, ಅಲ್ಲದೆ ರಾಜಕೀಯ ಜ್ಞಾನವೂ ಇಲ್ಲ. ಕರ್ನಾಟಕದ ರಾಜಕೀಯದ ಬಗ್ಗೆಯೂ ಗೊತ್ತಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆ ಅಷ್ಟೆ ಎಂದು ನಳಿನ್ ಕುಮಾರ್ ಕಟೀಲು ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಅವಧಿಯ 5 ಯೋಜನೆಗಳ ತನಿಖೆಗೆ ವಹಿಸಿದ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು. ಯಡಿಯೂರಪ್ಪ ಸಿಎಂ ಆದ ಮೇಲೆ ವಗಾವಣೆ,, ದ್ವೇಷದ ರಾಜಕಾರಣ ಮಾತ್ರ ಮಾಡುತ್ತಿದ್ದಾರೆ. ನೆರೆಗೆ ತುತ್ತಾದ ಜನರಿಗೆ ಯಾವುದೇ ಪರಿಹಾರ ಕೊಟ್ಟಿಲ್ಲ. ಈಶ್ವರಪ್ಪ ಅವರು ಕೊಟ್ಟಿರೋ ಹಣನೇ ಹೆಚ್ಚಾಯಿತು ಹೇಳುತ್ತಾರೆ. ಇದರಲ್ಲೆ ತಿಳಿಯುತ್ತದೆ ಜನರ ಬಗ್ಗೆ ಬಿಜೆಪಿ ಅವರಿಗೆ ಕಾಳಜಿ ಇಲ್ಲ ಎಂದು ಹೇಳಿದರು.

ಸುಮ್ಮನೆ ಎಲ್ಲಾ ಯೋಜನೆಗಳ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಇದು ದ್ವೇಷದ ರಾಜಕಾರಣ ಅಲ್ಲದೆ ಮತ್ತೇನು ಎದು ಪ್ರಶ್ನಿಸಿದರು. ಯಡಿಯೂರಪ್ಪ ವಿಧಾನಸೌಧದಲ್ಲಿ ದ್ವೇಷದ ರಾಜಕಾರಣ ಮಾಡಲ್ಲ ಎಂದಿದ್ದರು. ಆದರೆ ಇವತ್ತು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!