ನವಜೋತ್ ಸಿಂಗ್ ಸಿಧು ಸಚಿವ ಸ್ಥಾನಕ್ಕೆ ರಾಜೀನಾಮೆ

ಚಂಡಿಗಢ: ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್ ಸಿಂಗ್‌ ಅವರೊಂದಿಗಿನ ಮನಸ್ತಾಪದ ಹಿನ್ನಲೆಯಲ್ಲಿ ಸಚಿವ ನವಜೋತ್ ಸಿಂಗ್ ಸಿಧು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜೂನ್‌ 10 ರಂದು ರಾಹುಲ್‌ ಗಾಂಧಿ ಅವರಿಗೆ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಟ್ವೀಟ್‌ ಮಾಡುವ ಮೂಲಕ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಅಮರೀಂದರ್ ಸಿಂಗ್‌ ಅವರಿಗೂ ರಾಜೀನಾಮೆ ಪತ್ರ ಕಳುಹಿಸುವುದಾಗಿಯೂ ಟ್ವೀಟ್‌ ಮಾಡಿದ್ದಾರೆ.
ಸಿಧು ಅವರ ಪತ್ನಿ ನವಜೋತ್‌ ಕೌರ್‌ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್‌ ನಿರಾಕರಿಸಿದ್ದರಿಂದ ಸಿಧು ಮತ್ತು ಅಮರೀಂದರ್ ಸಿಂಗ್ ನಡುವೆ ಮನಸ್ತಾಪ ಉಂಟಾಗಿತ್ತು.
ಈ ಹಿಂದೆ ಮೂರು ಖಾತೆಗಳನ್ನು ನಿರ್ವಹಿಸುತ್ತಿದ್ದ ಸಿಧು ಅವರಿಂದ ಎರಡು ಖಾತೆಗಳನ್ನು ವಾಪಾಸು ಪಡೆದುಕೊಳ್ಳಲಾಗಿತ್ತು. ಕಳೆದ ತಿಂಗಳು ನಡೆದ ಸಂಪುಟ ಪುನಾರಚನೆ ವೇಳೆ ಸಿಧುಗೆ ವಿದ್ಯುತ್‌ ಖಾತೆ ನೀಡಲಾಗಿತ್ತು. ಆದರೆ ಅವರು ಆ ಖಾತೆಯನ್ನು ವಹಿಸಿಕೊಳ್ಳದ ಕಾರಣ  ಆ ಖಾತೆಯನ್ನು ಮುಖ್ಯಮಂತ್ರಿಗಳೇ ನಿರ್ವಹಣೆ ಮಾಡುತ್ತಿದ್ದರು.
ಇದೀಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅಮರೀಂದರ್ ಸಂಪುಟದಿಂದ ಹೊರ ಬಂದಿದ್ದಾರೆ. ಅವರ ಮುಂದಿನ ನಡೆ ನಿಗೂಢವಾಗಿದೆ

Leave a Reply

Your email address will not be published. Required fields are marked *

error: Content is protected !!