ಬಿಎಸ್‌ಎನ್‌ಎಲ್ ಮುಚ್ಚುವ ಪ್ರಸ್ತಾವನೆ ಇಲ್ಲ : ಸಚಿವ ರವಿಶಂಕರ್ ಪ್ರಸಾದ್

ನವದೆಹಲಿ: ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ (ಮಹಾನಗರ ಟೆಲಿಕಾಂ ನಿಗಮ ಲಿಮಿಟೆಡ್) ಮುಚ್ಚುವ ಸುದ್ದಿಯ ಬಗ್ಗೆ ಕೇಂದ್ರ ದೂರಸಂರ್ಪಕ ಖಾತೆಯ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಎರಡೂ ಸಂಸ್ಥೆಗಳನ್ನು ಮುಚ್ಚುವ ಯಾವ ಪ್ರಸ್ತಾವನೆಯೂ ಸರಕಾರದ ಮುಂದಿಲ್ಲ, ಈ ಸಂಸ್ಥೆಯನ್ನು ಲಾಭದತ್ತ ತರುವಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ದಪಡಿಸುತ್ತಿದ್ದೇವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

 ದೂರಸಂರ್ಪಕ ಸಚಿವ ರವಿಶಂಕರ್ ಪ್ರಸಾದ್‌ಗೆ ಸ್ವಪಕ್ಷದವರಿಂದಲೇ ಕೌಂಟರ್ ಅಹಮದಾಬಾದ್ ಮೂಲದ ಇಂಡಿಯನ್ ಇನ್ಸ್ಟಿಟ್ಯೂಟ್ ಮತ್ತು ಡಿಲಾಯಟ್ ಸಂಸ್ಥೆಗಳಿಗೆ, ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಪುನರ್ ರಚನೆಗೆ ಮತ್ತು ಈ ಕ್ಷೇತ್ರದಲ್ಲಿನ ಖಾಸಗಿ ಸಂಸ್ಥೆಗಳಿಗೆ ಸ್ಪರ್ಧೆ ನೀಡಲು ಪ್ಲ್ಯಾನ್ ಸಿದ್ದಪಡಿಸಲು ಸೂಚಿಸಲಾಗಿದೆ. ಈ ಎರಡು ಸಂಸ್ಥೆಗಳು ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನಷ್ಟದಲ್ಲಿರುವ ಈ ಎರಡು ಸಂಸ್ಥೆಗಳು ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದೆ ಎಂದು ಸಚಿವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!