ಒಂಟಿ ವೃದ್ದೆ ಕೊಲೆಗೈದು ಚಿನ್ನಾಭರಣ ಲೂಟಿ

ಉಡುಪಿ:  ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ಒಂಟಿ ವೃದ್ದಿಯನ್ನು ಕೊಲೆಗೈದು ಚಿನ್ನಾಭರಣ ಲೂಠಿ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವೃದ್ದೆ ರತ್ನಾವತಿ ಜಿ.ಶೆಟ್ಟಿ (80) ಸುಬ್ರಹ್ಮಣ್ಯ ನಗರದ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು.

ಘಟನೆ ಜುಲೈ.2 ರಿಂದ 5 ರ ನಡುವೆ ನಡೆದಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತರು ಮನೆ ಹಿಂಭಾಗದಿಂದ ಪ್ರವೇಶಿಸಿ ಅವರ ಬೆಡ್ ರೂಂ ಹಾಗು ಹಾಲ್ ನಲ್ಲಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಏನು ಸಿಗದಿದ್ದಾಗ ವೃದ್ದೆಯನ್ನು ಮಾರಕಯುದಗಳಿಂದ ಹೊಡೆದು ಅವರ ಕುತ್ತಿಗೆ,ಕಿವಿ, ಕೈನಲ್ಲಿದ್ದ ಚಿನ್ನಾಭರಣಗಳನ್ನು ಪರಾರಿಯಾಗಿದ್ದಾರೆ.

ಘಟನಾಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಪರಿಶೀಲನೆ ನಡೆಸಿದ್ದಾರೆ.ಉಡುಪಿ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!