ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತದೆ: ಜಿಲ್ಲಾ ಜೆಡಿಎಸ್

ಉಡುಪಿ : ಅಂದು ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಸಂಪುಟ ವಿಸ್ತರಣೆಗೊಂಡಾಗ ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತದೆ ಎಂದು ವ್ಯಂಗ್ಯ ಮಾಡಿದ್ದ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ, ಇಂದು ತನಗೆ ದೊರೆತ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಾಗುತ್ತಿರುವುದು ನಿಜಕ್ಕೂ ವಿಪರ್ಯಾಸ ಮತ್ತು ಇದಕ್ಕೆ ಸಿ.ಟಿ. ರವಿಯವರೇ ಸ್ಪಷ್ಟನೆ ನೀಡಬೇಕಾಗಿದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ವಕ್ತಾರ ಪ್ರದೀಪ್ ಜಿ ತಿಳಿಸಿದ್ದಾರೆ.
ನೂತನ ಸಚಿವರಿಗೆ ಇಂದು ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಬಿಜೆಪಿಯ ಪ್ರಭಾವಿ ನಾಯಕ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರಿಗೆ ಪ್ರವಾಸೋದ್ಯಮ ಕನ್ನಡ ಮತ್ತು ಸಂಸ್ಕೃತಿ ಖಾತೆ ನೀಡಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿ, ತಾನು ನಿರೀಕ್ಷಿಸಿದ ಖಾತೆ ಸಿಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!