ಪಡುಕೆರೆ ಕಡಲ್ಕೊರೆತ : ವಿನಯ್ ಕುಮಾರ್ ಸೊರಕೆ ಭೇಟಿ

ಮಲ್ಪೆ: ಕರಾವಳಿ ತೀರ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಮಲ್ಪೆಯ ಪಡುಕರೆಯ ಕಡಲ್ಕೊರೆತ ಪ್ರದೇಶಕ್ಕೆ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿ ಪರಿಸ್ಥಿಯನ್ನು ಅವಲೋಕಿಸಿ, ಎಂಜಿನಿಯರ್ ರಾಥೋಡ್, ಎಸಿ ಮತ್ತು ಡಿಸಿ ಮತ್ತು ನಾಳೆ ಉಡುಪಿ ಪ್ರವಾಸದಲ್ಲಿರುವ ಕಂದಾಯ ಸಚಿವರಾದ ಆರ್ ವಿ ದೇಶಪಾಂಡೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರನ್ನು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಮನವಿ ಮಾಡಿದರು

ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸರಸು ಡಿ. ಬಂಗೇರ ,ಉದ್ಯಾವರ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಸುಗಂಧಿ ಶೇಖರ್, ಉಪಾಧ್ಯಕ್ಷರಾದ ರಿಯಾಜ್ ಪಳ್ಳಿ, ಸದಸ್ಯರಾದ ಮಿತೇಶ್ ಕುಮಾರ್, ಕಿರಣ್ ಕುಮಾರ್, ರವಿ, ಕೃಷ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಇರ್ಫಾನ್, ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!