ಎಂ.ಜಿ.ಎಂ ನಲ್ಲಿ ಛಾಯಾ ಚಿತ್ರ ಪ್ರದರ್ಶನ “ಸ್ಪೆಕ್ಟ್ರಮ್” ಆಗಸ್ಟ್ 28ರಿಂದ ಸೆಪ್ಟೆಂಬರ್ 1ರ ವರೆಗೆ

ಉಡುಪಿ : ಎಂ.ಜಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಫೋಕಸ್ ರಾಘು ಅವರ ಛಾಯಾ ಚಿತ್ರ ಪ್ರದರ್ಶನ “ಸ್ಪೆಕ್ಟ್ರಮ್” ಆಗಸ್ಟ್ 28ರಿಂದ ಸೆಪ್ಟೆಂಬರ್ 1ರ ವರೆಗೆ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಏರ್ಪಡಿಸಿದೆ. 

28ರಂದು ಬೆಳಿಗ್ಗೆ 10 ಗಂಟೆಗೆ ಫೋಕಸ್ ರಾಘು ಅವರ ತಾಯಿ ರತ್ನಾವತಿ ಪ್ರದರ್ಶನದ ಉದ್ಘಾಟನೆ ಮಾಡಲಿದ್ದಾರೆ. ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ.ವಿಜಯ ಅಧ್ಯಕ್ಷತೆ ವಹಿಸಲಿದ್ದಾರೆ.  ಖ್ಯಾತ ಮನೋ ವೈದ್ಯ ಡಾ. ಪಿ. ವಿ ಭಂಡಾರಿ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ, ನಿಕೋನ್ ಇಂಡಿಯಾ ಪ್ರೈ. ಲಿ ನ ಆರ್.ಎಸ್. ಎಂ ರಾಜಶೇಖರ್ ಎನ್, ಪ್ರಸಿದ್ಧ ಛಾಯಾಗ್ರಾಹಕ, ನುರಿತ ಛಾಯಾಗ್ರಹಣ ತರಬೇತುದಾರ ಗುರುದತ್ ಕಾಮತ್ ಅತಿಥಿಗಳಾಗಿ ಆಗಮಿಸಲಿದ್ದಾರೆ. 

ಆಗಸ್ಟ್ 28ರಿಂದ ಸೆಪ್ಟೆಂಬರ್ 1 ರ ವರೆಗೆ ಒಟ್ಟು ಐದು ದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!