ಉಡುಪಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾಗಿ ರಾಜೇಶ್ ನಾಯ್ಕ್

ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾಗಿ ರಾಜೇಶ್ ನಾಯ್ಕ್ ಕೆಳಾರ್ಕಳ ಬೆಟ್ಟು ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಎಸ್ ಪ್ಯಾರಿ ಜಾನ್ ನೇಮಕ ಮಾಡಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ರವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಪತ್ರವನ್ನು ರಾಜೇಶ್ ನಾಯ್ಕ್ ಕೆಳಾರ್ಕಳಬೆಟ್ಟು ರವರಿಗೆ ಹಸ್ತಾಂತರಿಸಿ, ತಳಮಟ್ಟದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿದ್ದಕ್ಕೆ ಕಾಂಗ್ರೆಸ್ ಸೇವಾದಳದ ರಾಜ್ಯ ಸಂಘಟಕರಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಾವರ ನಾಗೇಶ್ ಕುಮಾರ್, ಅಶೋಕ್ ನಾಯರಿ, ಆನಂದ ಕಿದಿಯೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!