ಸ್ಪೀಕರ್ ಕರೆದ ವಿಚಾರಣೆಗೆ ಗೈರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ

ಬೆಂಗಳೂರು: ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರ ಪೈಕಿ ಇಬ್ಬರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಅವರನ್ನು ಸೋಮವಾರ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ವಿಚಾರಣೆಗೆ ಕರೆದಿದ್ದರು. ಆದರೆ, ಅವರಿಬ್ಬರೂ ಹಾಜರಾಗಲಿಲ್ಲ.
ರಾಮಲಿಂಗಾ ರೆಡ್ಡಿ ಅವರು ಸ್ವತಃ ಸಭಾಧ್ಯಕ್ಷರಿಗೆ ಕರೆ ಮಾಡಿ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದರು. ಗೋಪಾಲಯ್ಯ ಅವರು ಸಚಿವಾಲಯ ಕಾರ್ಯದರ್ಶಿ ಅವರಿಗೆ ಕರೆ ಮಾಡಿ ತಾವು ಗೈರಾಗಲಿರುವ ವಿಷಯ ತಿಳಿಸಿದರು.
ರಾಮಲಿಂಗಾ ರೆಡ್ಡಿ ಅವರು ತಮ್ಮ ಅನುಕೂಲ ಸಮಯಕ್ಕೆ ಬರಬಹುದು ಎಂದು ಸಭಾಧ್ಯಕ್ಷರು ತಿಳಿಸಿದರು ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ. ಮಂಗಳವಾರ ಅಥವಾ ಬುಧವಾರ ರೆಡ್ಡಿ ಅವರು ಸಭಾಧ್ಯಕ್ಷರ ಮುಂದೆ ಹಾಜರಾಗುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *

error: Content is protected !!