ನಾಳೆಯ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿ: ಸಚಿವ ಸುರೇಶ್ ಕುಮಾರ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ದ್ವಿತೀಯ ಪರೀಕ್ಷೆಯನ್ನು ಮುಂದೂಡಿ ಸಚಿವ ಎಸ್. ಸುರೇಶ್ ಕುಮಾರ್ ಆದೇಶಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿರುವ ಸಚಿವರು, ಕೊನೆಯ ಪರೀಕ್ಷೆಯನ್ನು ನಡೆಸುವಂತೆ ಈಗಾಗಲೇ ನಾವು ನಿರ್ಧರಿಸಿದ್ದೆವು. ಆದರೆ ಒಂಬತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ಹಿನ್ನೆಲೆಯಲ್ಲಿ ಪಿಯುಸಿ ಮಕ್ಕಳಿಗೆ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಕುರಿತು ಸಾಧಕ ಬಾಧಕಗಳ ಕುರಿತು ಚರ್ಚಿಸಿ ಪರೀಕ್ಷೆಯನ್ನು ಮುಂದೂಡುವಂತೆ ತೀರ್ಮಾನಿಸಲಾಗಿದೆ. 

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಕೊನೆಯ ಪರೀಕ್ಷೆಯನ್ನು ಮುಂದೂಡಲಾಗುತ್ತಿದೆ. ಏಪ್ರಿಲ್ ರ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಚರ್ಚಿಸಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!