ಜುಲೈ 19 ರಂದು ಶಿರೂರು ಸ್ವಾಮೀಜಿ ಸಂಸ್ಮರಣೆ

ಉಡುಪಿ:  ಜುಲೈ 19 ರಂದು ಶಿರೂರು ಸ್ವಾಮೀಜಿ ಸಂಸ್ಮರಣೆ.  ಸ್ಥಳ: ಸ್ಪಂದನ ವಿಶೇಷ ಮಕ್ಕಳ ಶಾಲೆ.  ಸಮಯ ಬೆಳಿಗ್ಗೆ. 11.30
ಶಿರೂರು ಶ್ರೀ ಲಕ್ಷ್ಮೀವರ ಶ್ರೀಪಾದರು ವೃಂದಾವನಸ್ಥರಾಗಿ ಒಂದು ವರುಷ ಕಳೆದ ಹಿನ್ನಲೆಯಲ್ಲಿ ಶಿರೂರು ಶ್ರೀ ಅಭಿಮಾನಿಗಳು ಶಿರೂರು ಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮವನ್ನು ನಡೆಸಲಿರುತ್ತಾರೆ.
ಶಿರೂರು ಶ್ರೀಗಳು ವೃಂದಾವನಸ್ಥರಾಗಿ ಒಂದು ವರುಷ ಕಳೆದರು ಅವರ ವೃಂದಾವನವನ್ನು ನಿರ್ಮಾಣ ಮಾಡದ ಹಿನ್ನಲೆಯಲ್ಲಿ ಶಿರೂರು ಅಭಿಮಾನಿಗಳು ಸಂಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಜುಲೈ 19 ರಂದು ಉಪ್ಪೂರಿನಲ್ಲಿರುವ ಸ್ಪಂದನ ವಿಶೇಷ ಮಕ್ಕಳ ಆಶ್ರಮದಲ್ಲಿ ಸಂಸ್ಮರಣೆ ಕಾರ್ಯಕ್ರಮ ಜರಗಲಿದೆ.
ಅಂದು ಬೆಳ್ಳಿಗ್ಗೆ 11.30 ಕ್ಕೆ ಭಜನಾ ತಂಡದವರಿಂದ ಭಜನೆ ಕಾರ್ಯಕ್ರಮ‌ ನಡೆಯಲ್ಲಿದೆ, ಕಾರ್ಯಕ್ರಮಕ್ಕೆ ಕೇಮಾರು ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿರುವರು‌.
ಇದೇ ಸಂಧರ್ಭದಲ್ಲಿ ಸ್ಪಂದನ ಶಾಲೆಯ ಮಕ್ಕಳಿಗೆ ಶಿರೂರು ಸ್ವಾಮೀಜಿಗಳ ಹೆಸರಿನಲ್ಲಿ ಅನ್ನದಾನ ಕೂಡ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸಮಸ್ತ ಶಿರೂರು ಸ್ವಾಮೀಜಿ ಅಭಿಮಾನಿಗಳು ಭಾಗವಹಿಸುವಂತೆ ಅಭಿಮಾನಿ‌ ಸಮಿತಿ  ವಿನಂತಿಸಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!