ಬಿಜೆಪಿ ಹಾಗೂ ಜೆಡಿಎಸ್ ನಡುವೆ ಒಳ ಒಪ್ಪಂದ ಆಗಿದೆ:ಸಿದ್ದರಾಮಯ್ಯ

ಉಡುಪಿ: ಸರ್ಕಾರ ಉಳಿಸಿಕೊಳ್ಳುವ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮಾತುಕತೆಯಾಗಿರುವುದು ಸತ್ಯ. ಇವರ ಒಳ ಒಪ್ಪಂದ ನಿಯಮ, ಷರತ್ತುಗಳು ಏನು ಎಂಬುದು ಗೊತ್ತಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬುಧವಾರ ಉಡುಪಿಯ ಪುರಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಸರ್ಕಾರ ಉಳಿಯಬೇಕಾದರೆ ಉಪ ಚುನಾವಣೆಯಲ್ಲಿ ಕನಿಷ್ಠ 8 ಸ್ಥಾನಗಳನ್ನು ಗೆಲ್ಲಬೇಕು. ಇದರಲ್ಲಿ ವಿಫಲವಾದರೆ ಸರ್ಕಾರ ಬೀಳಲಿದೆ. ಈ ಸಂದರ್ಭ ಜೆಡಿಎಸ್ ಬೆಂಬಲ ಕೊಟ್ಟರೆ ಕೊಡಲಿ ಎಂದರು.

ಜೆಡಿಎಸ್ ನಿಜವಾಗಿಯೂ ಜಾತ್ಯತೀತ ಪಕ್ಷವಾದರೆ ಬಿಜೆಪಿಗೆ ಖಂಡಿತ ಬೆಂಬಲ ನೀಡುವುದಿಲ್ಲ. ಕೊಟ್ಟರೆ, ಆ ಪಕ್ಷದ ಜಾತ್ಯತೀತತೆಯ ಬಣ್ಣ ಬಯಲಾಗಲಿದೆ ಎಂದು ಕುಟುಕಿದರು.

ಅನರ್ಹ ಶಾಸಕರ ರಾಜೀನಾಮೆ ವಿಚಾರದಲ್ಲಿ ಯಡಿಯೂರಪ್ಪ ಆಡಿಯೋ ಪ್ರಕರಣವನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಕಾಂಗ್ರೆಸ್‌ಗೆ ಯಾವುದೇ ಹಿನ್ನಡೆಯಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಐವನ್ ಡಿಸೋಜ, ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಯುಆರ್ ಸಭಾಪತಿ, ಗೋಪಾಲ ಪೂಜಾರಿ,  ಎಂಎ ಗಫೂರ್, ಪ್ರಖ್ಯಾತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!