ಮೈತ್ರಿ ಸರಕಾರದ‌ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯ ಕಾರಣ: ಸಂಸದೆ ಶೋಭಾ

ಉಡುಪಿ:ಮೈತ್ರಿ ಸರಕಾರದ ಆಂತರಿಕ ಗೊಂದಲ ಸ್ಪೋಟಗೊಂಡಿದೆ ಕುಮಾರಸ್ವಾಮಿ ಯನ್ನು ಸಿಎಂ ಅಂತ ಒಪ್ಪಿಕೊಳ್ಳಲು ಸಿದ್ದರಾಮಯ್ಯ ತಯಾರಿಲ್ಲ ಹಾಗಾಗಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟಿದ್ದಾರೆ .

ಇದರಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ನಡುವೆಆಂತರಿಕ ಜಗಳ ಹೆಚ್ಚು ಮಾಡಿದ್ದೇ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿಯ‌ ಅಧ್ಯಕ್ಷ ರಾದ ಇವರ‌ ಸಾಧನೆ.ಆನಂದ್ ಸಿಂಗ್ ರಾಜೀನಾಮೆ ಕೊಟ್ಟಾಗಲೇ ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕಿತ್ತು.  ಕುಮಾರಸ್ವಾಮಿ ಸಿದ್ದರಾಮಯ್ಯ, ಪರಮೇಶ್ವರ್, ರೇವಣ್ಣ ವರ್ತನೆಯಿಂದ ಜನ ರೋಸಿ ಹೋಗಿದ್ದಾರೆ.

ಇವರ ಪಾಪದ ಫಲವಾಗಿ  ಮೈತ್ರಿಸರಕಾರ ಬಿದ್ದು ಹೋದರೆ  ಮೋದಿ ಯಡಿಯೂರಪ್ಪ ಅವರ ಕಡೆ ಕೈ ತೋರಿಸಬೇಡಿ ಎಂದು ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಭೇಟಿಯಾದ‌ ಸುದ್ಧಿಗಾರರಿಗೆ ಹೇಳಿದರು.ಸರಕಾರ ಬೀಳೋಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ,ಬೇರೆ ಪಕ್ಷದ ಸದಸ್ಯರಲ್ಲದವರು ಬಿಜೆಪಿಗೆ ಬರಬಹುದು ರಾಜೀನಾಮೆ ಸ್ವೀಕಾರವಾದ ಮೇಲೆ ಯಾರೂ ಬಿಜೆಪಿಗೆ ಸೇರಬಹುದೆಂದುಸಂಸದೆ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಿದವರಿಗೆ  ಆಹ್ವಾನ ನೀಡಿದರು.

ಪ್ರಧಾನಿ ನರೇಂದ್ರಮೋದಿಯವರ ಕೇಂದ್ರದ ಯೋಜನೆ ಅನುಷ್ಟಾನಕ್ಕೆ ರಾಜ್ಯದಲ್ಲಿ ಬಿಜೆಪಿಸರಕಾರ  ಬರಬೇಕು  ಎಂದರು.ಬರಗಾಲ ಇದ್ದಾಗಲೇ ಸಿಎಂ ಅಮೇರಿಕಾ ಪ್ರವಾಸದಲ್ಲಿದ್ದಾರೆ ಉಡುಪಿಯ ರೆಸಾರ್ಟಲ್ಲಿ ಸಿಎಂ ಮಸಾಜ್ ಮಾಡಿಸಿಕೊಂಡರು.

ಸಿಎಂ ಗ್ರಾಮ ವಾಸ್ತವ್ಯದ ನಾಟಕವಾಡಿಅಮೇರಿಕಾಕ್ಕೆ ಹೋದರು ಸಿಎಂ ವಾಪಾಸ್ಸಾಗುವಾಗ ಕಾಂಗ್ರೆಸ್ ಯಾವ ನಾಟಕ ಆಡುತ್ತೋ ಕಾದು ನೋಡಬೇಕು ರಾಜ್ಯದ ಬೆಳವಣಿಗೆಯನ್ನು ರಾಜ್ಯಪಾಲರು ಗಮನಿಸಬೇಕು ಎಂದು ಅಭಿಪ್ರಾಯ ಪಟ್ಟರು. 15 ಜನ ರಾಜೀನಾಮೆ ಕೊಟ್ಟರೆ ಸರಕಾರಕ್ಕೆ ಬಹುಮತ ಇಲ್ಲ ರಾಜೀನಾಮೆ ಕೊಟ್ಟವರು ಬಿಜೆಪಿ ಸಂಪರ್ಕದಲ್ಲಿ ಇಲ್ಲಕಾಂಗ್ರೆಸ್ ನಾಯಕರ ನಡವಳಿಕೆಯೇ ಶಾಸಕರ ರಾಜೀನಾಮೆಗೆ ಕಾರಣ.

 ಬಿಜೆಪಿ ಸಿದ್ಧಾಂತ- ಮೋದಿಯನ್ನು ಒಪ್ಪಿ ಯಾರೂ ಪಕ್ಷಕ್ಕೆ ಬರಬಹುದು
ಜಿ‌.ಟಿ ದೇವೇಗೌಡ ಹಿಂದೆ ನಮ್ಮ ಜೊತೆ ಇದ್ದರು ಅಲ್ಲಿ ಬೇಸರ ಆದ್ರೆ ಯಾವತ್ತೂ ಜಿಟಿಡಿ ಬಿಜೆಪಿಗೆ ಬರಬಹುದುಗೊಂದಲ ನಿವಾರಣೆಗೆ ಡಿಕೆಶಿ ಎಂಟ್ರಿ ಬಹಳ ವಿಳಂಬವಾಗಿದೆ, ಜಿಂದಾಲ್ ಪರಾಬಾರೆಗೆ ಡಿಕೆಶಿಯೇ ಕಾರಣ ಸ್ಪೀಕರ್ ಕಚೇರಿಗೆ ಈಗ ಹೋಗಿ ಸಮಾಧಾನ ಮಾಡಿದರೆ ಪ್ರಯೋಜನ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Leave a Reply

Your email address will not be published. Required fields are marked *

error: Content is protected !!