ಸಿದ್ಧಾರ್ಥ ತಂದೆಗೆ ವಯೋಸಹಜ ಸಮಸ್ಯೆಗಳಿಂದ ಚಿಕಿತ್ಸೆ ಮುಂದುವರಿಕೆ:ವೈದ್ಯರ ಸ್ಪಷ್ಟನೆ

ಮೈಸೂರು: ಕಾಫಿ ಸಮೂಹದ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಅವರ ತಂದೆ ಗಂಗಯ್ಯ ಹೆಗ್ಡೆ ಚಿಕಿತ್ಸೆ ಪಡೆಯುತ್ತಿದ್ದು, ಅವರ ನಿಧನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.

‘ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬದವರಿಗೂ ಕರೆಗಳು ಬರುತ್ತಿವೆ. ವದಂತಿಗಳಿಗೆ ಕಿವಿಗೊಡಬೇಡಿ’ ಎಂದಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಗಂಗಯ್ಯ ಹೆಗ್ಡೆ ಸುಮಾರು ಒಂದೂವರೆ ತಿಂಗಳಿನಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ ಸಿದ್ಧಾರ್ಥ ನಿಧನರಾದಾಗ ಅವರು ಕೋಮಾದಲ್ಲಿದ್ದರು. ಹೀಗಾಗಿ, ಅಂತ್ಯಕ್ರಿಯೆಗಾಗಿ ತವರೂರು ಮೂಡಿಗೆರೆ ತಾಲ್ಲೂಕಿನ ಚೇತನಹಳ್ಳಿಗೆ ಹೋಗಲು ಸಾಧ್ಯವಾಗಿರಲಿಲ್ಲ.

Leave a Reply

Your email address will not be published. Required fields are marked *

error: Content is protected !!