ವಿಧಾನಸಭೆಯ ಸಭಾಪತಿ ಸ್ಥಾನಕ್ಕೆ ಶಿರಸಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ ಖಚಿತ

ಬೆಂಗಳೂರು: ಕೆ.ಆರ್‌ ರಮೇಶ್‌ ಕುಮಾರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಶಿರಸಿಯ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳವಾರ ಬೆಳಗ್ಗೆ 11.30ರ ಸುಮಾರಿನಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಹಲವು ಮುಖಂಡರು ಕಾಗೇರಿ ಅವರೊಂದಿಗಿದ್ದರು.
ಸಭಾಪತಿ ಸ್ಥಾನಕ್ಕೆ ಕಾಗೇರಿ ಅವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರ ಆಯ್ಕೆ ಖಚಿತವಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ಮಾಜಿ ಸ್ಪೀಕರ್‌ ಬೋಪಯ್ಯ ಅವರನ್ನೇ ಈ ಬಾರಿಯೂ ಸ್ಪೀಕರ್‌ ಮಾಡಲು ಬಿಜೆಪಿ ಉದ್ದೇಶಿಸಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ, ಅಂತಿಮವಾಗಿ ಕಾಗೇರಿ ಅವರನ್ನು ಬಿಜೆಪಿ ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿಕೊಂಡಿದೆ

Leave a Reply

Your email address will not be published. Required fields are marked *

error: Content is protected !!