ಬಿಜೆಪಿ ಸರ್ಕಾರ ಸುಭದ್ರವಾಗಿರಲು ಗೋಕರ್ಣನಾಥೇಶ್ವರನಿಗೆ ವಿಶೇಷ ಪೂಜೆ

ಕಾರವಾರ: ಬಿಜೆಪಿ ಸರ್ಕಾರ ಸುಭದ್ರವಾಗಿರಲು ಗೋಕರ್ಣನಾಥೇಶ್ವರನಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.ರಾಜ್ಯದ ಬಿಜೆಪಿ ಸರ್ಕಾರ ಮುಂದಿನ ನಾಲ್ಕು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರೈಸಲೆಂದು ಮತ್ತು ಕುಮಟಾ ಕ್ಷೇತ್ರ ಶಾಸಕ ದಿನಕರ ಶೆಟ್ಟಿಯವರಿಗೆ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಸ್ಥಾಪನೆ ಆದಾಗಿನಿಂದ ಈವರೆಗೆ ಕುಮಟಾ ಕ್ಷೇತ್ರಕ್ಕೆ ಸಚಿವ ಸ್ಥಾನ ಸಿಗಲಿಲ್ಲ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗಿ, ಕಳೆದ 30 ವರ್ಷಗಳಿಂದ ಜನತೆಯ ನಾಡಿಮಿಡಿತವನ್ನು ಅರಿತು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ದಿನಕರ ಶೆಟ್ಟಿಯವರಿಗೆ ಸಚಿವ ಸ್ಥಾನ ಸಿಗಬೇಕೆಂಬ ಬೇಡಿಕೆ ಈಡೇರಬೇಕು ಎಂದು ಎಲ್ಲ ಮುಖಂಡರು, ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.

ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದಯಾ ನಾಯ್ಕ, ಶಕ್ತಿ ಕೇಂದ್ರ ಅಧ್ಯಕ್ಷರಾದ ವಸಂತ ಶೆಟ್ಟಿ, ಚಂದ್ರಶೇಖರ ನಾಯ್ಕ, ಪ್ರಸನ್ನ ನಾಯ್ಕ, ತಾ. ಪಂ ಸದಸ್ಯ ಮಹೇಶ್ ಶೆಟ್ಟಿ, ಗ್ರಾ. ಪಂ ಸದಸ್ಯ ಗಣಪತಿ ಗೌಡ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!