ದೆಹಲಿಯಿಂದ ರಾಜ್ಯಕ್ಕೆ ವಿಶೇಷ ರೈಲು,ದುಬೈನಿಂದ ಬೆಂಗಳೂರಿಗೆ ವಿಶೇಷ ವಿಮಾನ-ಸದಾನಂದ ಗೌಡ

ನವದೆಹಲಿ: ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರೇಲ್ವೆ ಸಚಿವ ಪಿಯುಶ್‌ ಗೋಯಲ್‌ ಅವರೊಂದಿಗೆ ತಾವು ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದಿದ್ದಾರೆ.

ದೆಹಲಿಯ ಹೊರತಾಗಿ ಹರಿಯಾಣ, ಪಂಜಾಬ್‌ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್‌ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದು, ಆ ರಾಜ್ಯಗಳ ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!