ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಕಾಲದಲ್ಲಿ ಸ್ಪಂದಿಸುತ್ತಿದೆ : ಕೆ. ಜಿ. ಪೀಟರ್

ಮಡಿಕೇರಿ : ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿರುವ ಕೊಡಗು ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯವಾಗಿದ್ದು, ಜನ ಜಾಗೃತರಾಗುವ ಮೂಲಕ ಕುಂದು, ಕೊರತೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆಯುವುದು ಸೂಕ್ತವೆಂದು ನಗರಸಭೆಯ ಮಾಜಿ ಸದಸ್ಯ ಕೆ. ಜಿ. ಪೀಟರ್ ತಿಳಿಸಿದ್ದಾರೆ.

 ಅವರು ನಗರದ ಕನ್ನಂಡಬಾಣೆ ಪಂಪ್‌ಹೌಸ್‌ನ ಬಾವಿ ಬಳಿ ಶೌಚಾಲಯ ನಿರ್ಮಿಸಿರುವುದನ್ನು ಆಕ್ಷೇಪಿಸಿ ಸಾರ್ವಜನಿಕರ ಪರವಾಗಿ ಮನವಿ ಸಲ್ಲಿಸಿದ ತಕ್ಷಣ ಜಿಲ್ಲಾಧಿಕಾರಿಗಳು ಸ್ಪಂದಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಇದು ಶ್ಲಾಘನೀಯ ಕಾರ್ಯವಾಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಜಿಲ್ಲಾಡಳಿತ ಸ್ಪಂದಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!