ಜನತಾ ಕರ್ಫ್ಯೂ ಯಶಸ್ಸು ಎಂದು ಪರಿಗಣಿಸಬಾರದು, ಸಮರ ಆರಂಭ ಮಾತ್ರ: ಮೋದಿ

ನವದೆಹಲಿ: ಇಂದು ಜಾರಿಗೊಳಿಸಲಾಗಿದ್ದ 14 ತಾಸುಗಳ ಜನತಾ ಕರ್ಫ್ಯೂ ಕೊರೋನಾವೈರಸ್ ವಿರುದ್ಧದ ಸಮರದ ಆರಂಭ ಮಾತ್ರ,  ಯಾವುದೇ ಸವಾಲ್ ಗಳನ್ನು ಒಗ್ಗಟ್ಟಾಗಿ ಸೋಲಿಸುವುದಾಗಿ ದೇಶವಾಸಿಗಳು ಸಾಕ್ಷಿಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದಿನ ಜನತಾ ಕರ್ಫ್ಯೂ ರಾತ್ರಿ 9 ಗಂಟೆಗೆ ಮುಕ್ತಾಯವಾಗಲಿದೆ. ಆದರೆ, ಹಾಗೆಂದ ಮಾತ್ರ ಸಂಭ್ರಮಾಚರಣೆ ಪಡಬೇಕಿಲ್ಲ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಜನತಾ ಕರ್ಫ್ಯೂವನ್ನು  ಯಶಸ್ಸು ಎಂದು ಪರಿಗಣಿಸಬಾರದು, ಇದು ಧೀರ್ಘ ಕಾಲದ ಸಮರದ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಕೊರೋನಾವೈರಸ್  ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಜನರಲ್ಲಿ ಅರಿವು ಹಾಗೂ ದೇಶವನ್ನು ಕೊರೋನಾ ವೈರಸ್ ಮುಕ್ತಗೊಳಿಸಲು ಸೇವೆ ಸಲ್ಲಿಸುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಲು ಜನತಾ ಕರ್ಫ್ಯೂವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದರು.

Leave a Reply

Your email address will not be published. Required fields are marked *

error: Content is protected !!