ಕಾರ್ಕಳ: ಟಿಪ್ಪರ್ ಡಿಕ್ಕಿ ಇಬ್ಬರ ಸಾವು, ಚಾಲಕ ಗಂಭೀರ

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆಗೆ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರು ವಾಮಂಜೂರು ನಿವಾಸಿ ರಮಾನಂದ (40), ಗುರುಪುರ ನಿವಾಸಿ ಸುಬಾಷ್ (46) ಮೃತಪಟ್ಟ ದುರ್ದೈವಿಗಳು. ಟಿಪ್ಪರ್ ಚಾಲಕ ಬಜ್ಪೆ ನಿವಾಸಿ ಅಕ್ಬರ್ ಕಾರ್ಕಳ ಕಡೆಯಿಂದ ಮೂಡಬಿದ್ರೆ ಕಡೆಗೆ ಟಿಪ್ಪರನ್ನು ಅತೀವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿರುವಾಗ ಸಾಣೂರು ಬಳಿಯ ಚಿಲಿಂಬಿ ಎಂಬಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿನ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಟಿಪ್ಪರ್ ಚಾಲಕ ಅಕ್ಬರ್‌ನಿಗೂ ಗಂಭೀರ ಗಾಯಗಳಾಗಿವೆ.

ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!