ಸಂಸದ ಪ್ರತಾಪ್ ಸಿಂಹ ರಾಜಕೀಯ ಲಾಭಕ್ಕಾಗಿ ಕೋಮು ಗಲಭೆ ಸೃಷ್ಟಿಸಲು ಹುನ್ನಾರ- ಕಾಂಗ್ರೆಸ್

ಮೈಸೂರು ಸೆ.14: ಸಂಸದ ಪ್ರತಾಪ್ ಸಿಂಹ ಅವರು ರಾಜಕೀಯ ಲಾಭಕ್ಕಾಗಿ ಕೋಮು ಗಲಭೆ ಸೃಷ್ಟಿಸಲು ಹುನ್ನಾರ ರೂಪಿಸಿದ್ದಾರೆ ಎಂದು  ಮೈಸೂರು ಕಾಂಗ್ರೆಸ್ ನಿಯೋಗ ಆರೋಪಿಸಿದೆ.

ಈ ಬಗ್ಗೆ ನಿಯೋಗ ಮೈಸೂರು ಜಿಲ್ಲಾಧಿಕಾರಿಗಳಿಗೆ ದೂರು ಕೂಡಾ ನೀಡಿದೆ. ಈ ದೂರಿನಲ್ಲಿ, ಕೆಡಿಪಿ ಸಭೆಯಲ್ಲಿ ಸಂಸದರು ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ. ಮುಸ್ಲಿಂರ ದರ್ಗಾ ಹೊಡೆಯಲು ನಿಮಗೆ ತೊಡೆ ನಡುಗುತ್ತಾ ಎಂಬ ಪ್ರತಾಪ್ ಸಿಂಹರವರ  ಹೇಳಿಕೆ ಸರಿಯಲ್ಲ.

ರಾಜಕೀಯ ಲಾಭಕ್ಕಾಗಿ ರಾತ್ರೋ ರಾತ್ರಿ ದೇವಸ್ಥಾನಗಳನ್ನು ಹೊಡೆದು ಹಾಕಿ ಕೋಮು ಗಲಾಭೆ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಆರೋಪ ಮಾಡಲಾಗಿದೆ. ಇದರೊಂದಿಗೆ ಅರಸು ರಸ್ತೆಯ ದರ್ಗಾ, ಇರ್ವೀನ್ ರಸ್ತೆಯಲ್ಲಿರುವ ಮಸೀದಿ, ಈ ಎರಡು ವಿಚಾರ ಈಗ ಕೋರ್ಟ್ ನಲ್ಲಿದೆ. ಆದರೂ ಪದೇ ಪದೇ ಇದನ್ನು ಕೆಡವಿ ಎಂದು ಕೆಡಿಪಿ ಸಭೆಯಲ್ಲಿ ಸಂಸದರು ಆಗ್ರಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಲಾಭದ ಹುನ್ನಾರವಿದೆ ಎಂದು ಆರೋಪಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!