ಸಂಚಾರಿ ಪೊಲೀಸರ ದಂಡ ವಸೂಲಿ ವಿರುದ್ಧ ತಿರುಗಿ ಬಿದ್ದ ಉಡುಪಿ ನಾಗರೀಕರು

ಉಡುಪಿ: ಕೇಂದ್ರ ಸರಕಾರದ ಸಂಚಾರ ನಿಯಮ ಉಲ್ಲಂಘನೆಯ ದಂಡ ವಸೂಲಿ ವಿರುದ್ಧ ಉಡುಪಿ ಜಿಲ್ಲಾ ನಾಗರೀಕರು ಪೊಲೀಸರ ವಿರುದ್ಧ ತಿರುಗಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದೆ.

ಇಂದು ಸಂಜೆ ಪಿ.ಪಿ.ಸಿ. ಕಾಲೇಜ್ ಬಳಿ ಮಫ್ತಿಯಲಿರುವ ಪೊಲೀಸನೋರ್ವ ದ್ವಿಚಕ್ರ ವಾಹನಗಳನ್ನು ತಡೆದು ದಂಡ ವಸೂಲಿಗೆ ಇಳಿದಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳೀಯರು,ವಿದ್ಯಾರ್ಥಿಗಳು ಸಂಚಾರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.

ಮಾತ್ರವಲ್ಲದೆ ಅಲ್ಲೆ ಸ್ವಲ್ಪ ದೂರದಲ್ಲಿ ಇಲಾಖಾ ಜೀಪಿನಲ್ಲಿದ್ದ ಟ್ರಾಫಿಕ್ ಎಸ್ ಐ . ಅವರನ್ನು ತಡೆದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

Leave a Reply

Your email address will not be published. Required fields are marked *

error: Content is protected !!