ಉಡುಪಿ: ನಗರದ ಅಂಗಡಿ ಮುಂಗಟ್ಟು ಮುಚ್ಚಿಸಿದ ಪೌರಾಯುಕ್ತರು

ಉಡುಪಿ: ನಗರದಲ್ಲಿ ಜನನಿಬಿಡ ಪ್ರದೇಶಗಳನ್ನು ಬಂದ್‌ಗೊಳಿಸುವಂತೆ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು. ತಕ್ಷಣದಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಪೌರಾಯುಕ್ತರಿಂದ ಆದೇಶ.


ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದರಿಂದ ನಗರ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಸೂಚನೆ ನೀಡಿ ಧ್ವನಿವರ್ಧಕದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಹೊಟೇಲ್‌ಗಳಲ್ಲಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ವ್ಯವಸ್ಥೆಯಲ್ಲಿ ಮಾತ್ರ ನೀಡಲು ಸೂಚಿಸಿದ್ದಾರೆ.


ತಕ್ಷಣದಿಂದಲೇ ಬಟ್ಟೆ ಅಂಗಡಿ, ಚಿನ್ನಾಭರಣ ಮಳಿಗೆ, ಚಪ್ಪಲಿ ಅಂಗಡಿಗಳನ್ನು ಮುಂಚ್ಚುವಂತೆ ಧ್ವನಿವರ್ಧಕದಲ್ಲಿ ಘೋಷಿಸಿಕೊಂಡು ಹೋಗುತ್ತಿದ್ದಾರೆ, ಈ ಆದೇಶ ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ ಪ್ರಕರ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!