ಕೋಲ್ಕತ್ತ: ಸಿಡಿಲಿನ ಅಬ್ಬರ 20 ಜನ ಸಾವು

ಕೋಲ್ಕತ್ತ: ದಕ್ಷಿಣ ಬಂಗಾಳದ ಮೂರು ಜಿಲ್ಲೆಗಳಲ್ಲಿ ಸೋಮವಾರ ಸಂಭವಿಸಿದ ಸಿಡಿಲಿನ ಅಬ್ಬರಕ್ಕೆ ಸುಮಾರು 20 ಜನರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮುರ್ಷಿದಾಬಾದ್‌ನಲ್ಲಿ ಮತ್ತು ಹೂಗ್ಲಿಯಲ್ಲಿ ತಲಾ ಒಂಬತ್ತು ಮಂದಿ ಸಾವನ್ನಪ್ಪಿದರೆ, ಪುರ್ಬಾ ಮೆದಿನಿಪುರ ಜಿಲ್ಲೆಯಲ್ಲಿ ಇಬ್ಬರು ಸಿಡಿಲು ಬಡಿದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸಂಭವಿಸಿದ ಸಿಡಿಲಿನ ಅಬ್ಬರಕ್ಕೆ ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಜಂಗೀಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಕೋಲ್ಕತ್ತ ಸೇರಿದಂತೆ ದಕ್ಷಿಣ ಬಂಗಾಳದ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದು ಮಳೆಗಾಲ ಪೂರ್ವದ ಮಳೆ ಎಂದು ಹವಾಮಾನ ಇಲಾಖೆ ಕಚೇರಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!