ಜನತಾ ಕರ್ಫ್ಯೂಗೆ ಉಡುಪಿ ಜೆಡಿಎಸ್ ಬೆಂಬಲ

ಉಡುಪಿ – ಕೊರೋನಾ ಸೋಂಕು ತಡೆಗಟ್ಟಲು ಪ್ರಧಾನಿ ಮೋದಿಯವರು ಜನತಾ ಕರ್ಫ್ಯೂ ಆಚರಿಸಲು ಮನವಿ ಮಾಡಿದ್ದು ದೇಶದ ಜನರ ಆರೋಗ್ಯದ ಹಿತ ದೃಷ್ಟಿಯಿಂದ ದೇಶದ ರಕ್ಷಣೆಗಾಗಿ ಮಾಡಿದ ಈ ಮನವಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಘಟಕದ ಜಿಲ್ಲಾಧ್ಯಕ್ಷರಾದ ಯೋಗೀಶ್‌.ವಿ.ಶೆಟ್ಟಿಯವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ವೈಜ್ಞಾನಿಕವಾಗಿ ಕೊರೋನಾ ರೋಗವನ್ನು ತಡೆಗಟ್ಟುವ ಮೂಲಕ ದೇಶದ ಹಿತಾಸಕ್ತಿ ಕಾಪಾಡಲು ಪ್ರಧಾನಿಯವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳಿಗೆ ರಾಜಕೀಯ ಮಾಡದೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನಮಗೆ ಜನರ ಆರೋಗ್ಯದ ರಕ್ಷಣೆ ಮುಖ್ಯ. ಈ ಸಂಧರ್ಭದಲ್ಲಿ ಯಾರೂ ರಾಜಕೀಯ ಮಾಡದೆ ಇಂತಹ ತುರ್ತು ಪರಿಸ್ಥಿತಿಯಲ್ಲಿ ನಮ್ಮ ನಾಡನ್ನು ಬೆಂಬಲಿಸಬೇಕು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಕೋರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಿತ್ತಿರುವ ಎಲ್ಲಾ ವೈದ್ಯರಿಗೆ ಹಾಗೂ ನರ್ಸ್ ಗಳಿಗೆ ಹಾಗೂ ಪೋಲಿಸ್ ಅಧಿಕಾರಿಗಳಿಗೆ ತಮ್ಮ ನಿಸ್ವಾರ್ಥ ಕಾರ್ಯಕ್ಕಾಗಿ ಶ್ಲಾಘಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ನಾನು ಕೂಡ ಬೆಳಗ್ಗೆ 7 ಘಂಟೆಯಿಂದ ರಾತ್ರಿ 9 ಘಂಟೆಯವರಗೆ ಮನೆಯಲ್ಲಿದ್ದು 5 ಘಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಕೊರೋನಾದ ವಿರುದ್ಧ ಕಾರ್ಯಚರಿಸಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ಡಾಕ್ಟರ್ಸ್ ಗಳು , ನರ್ಸ್ ಗಳು, ಪೋಲೀಸ್ ಅಧಿಕಾರಿಗಳು ಹಾಗೂ ಇದಕ್ಕೆ ಸಂಬಂಧಪಟ್ಟು ಕಾರ್ಯರ್ಚರಿಸಿದ ಎಲ್ಲಾ ವರ್ಗದ ಜನರಿಗೆ ಮತ್ತು ವಿಶೇಷವಾಗಿ ಇದರ ಬಗ್ಗೆ ಜಾಗೃತಿ ಮೂಡಿಸಿದ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದ ಅರ್ಪಿಸಿ ಅವರಿಗೆ ಇನ್ನಷ್ಟು ಕೆಲಸ ಮಾಡಲು ಉತ್ತೇಜನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!