ಉಡುಪಿಯ ಕಲ್ಸಂಕ, ಮಠದಬೆಟ್ಟು, ಗುಂಡಿಬೈಲ್, ಬನ್ನಂಜೆ ಪರಿಸರದಲ್ಲಿ ನೆರೆ

ಉಡುಪಿ: ಎಡೆಬಿಡದೆ ಮಳೆಯಾಗುತ್ತಿದ್ದು, ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಉಡುಪಿಯ ಕಲ್ಸಂಕ, ಮಠದಬೆಟ್ಟು, ಗುಂಡಿಬೈಲ್, ಬನ್ನಂಜೆ ಪರಿಸರದಲ್ಲಿ ನೆರೆ ಸಂಭವಿಸಿದೆ.

ಐದು ದಿನಗಳಿಂದ ನಿರಂತರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ ಮಳೆಯಿಂದ ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳಲ್ಲಿಯೂ ನೀರು ತುಂಬಿಕೊಂಡಿದೆ. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆಯಲ್ಲಿ ಕಷ್ಟಪಟ್ಟು

ಸಂಚರಿಸುವಂತಾಗಿದೆ.

 24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತೀ ಹೆಚ್ಚು ದಾಖಲಾಗಿದ್ದು, 155 ಮಿಲಿಮೀಟರ್ ಮಳೆ ಸುರಿದಿದೆ. ಇನ್ನು ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

 

ನಿರಂತರ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜಿಗೆ ಘೋಷಿಸಿರುವ ರಜೆಯನ್ನು ವಿಸ್ತರಿಸುವಂತೆ ಪಿಯುಸಿ, ಪದವಿ ವಿದ್ಯಾರ್ಥಿಗಳ ಪೋಷಕರು ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರಿದ ಹಿನ್ನೆಲೆ ಉಡುಪಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ  ಬೆಳಿಿಗ್ಗೆ  ಪದವಿ ಕಾಲೇಜುಗಳಿಗೂ ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ನಿಿನ್ನೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಭಾರೀ ಗಾಳಿ, ಮಳೆ ಹಾಗೂ ಪೋಷಕರ ಒತ್ತಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತಕ್ಷಣ ಮೌಖಿಕ ರಜೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!