ಕೋಟ: ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ 8 ಮಂದಿ ವಶಕ್ಕೆ
ಕೋಟ ಜು.4 (ಉಡುಪಿ ಟೈಮ್ಸ್ ವರದಿ): ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಗೋಳಿಗರಡಿ ಹಾಡಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದ ಶಿವರಾಮ (44), ರಘು (46), ಸಾಸ್ತಾನದ ರಾಜು (50), ಮಾಬುಕಳದ ಶ್ರೀನಿವಾಸ (25), ಮಡಾಬೆಟ್ಟುವಿನ ಶಂಕರ (32), ಹೊಸಾಳದ ನಾಗರಾಜ (39), ಗುಂಡ್ಮಿಯ ರಾಘವೇಂದ್ರ (38), ಬೆಣ್ಣೆಕುದ್ರುವಿನ ಕರುಣಾಕರ (40), ಪೊಲೀಸರು ವಶಕ್ಕೆ ಪಡೆದವರು.
ಇಸ್ಪೀಟು ಜುಗಾರಿ ಬಗ್ಗೆ ಖಚಿತ ಮಾಹಿತಿ ಪಡೆದ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಅವರು ಇತರ ಸಿಬ್ಬಂದಿಗಳೊಂದಿಗೆ ಪಾಂಡೇಶ್ವರ ಗ್ರಾಮದ ಗೋಳಿಗರಡಿ ಹಾಡಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ ಮಾಡಿ 8 ಮಂದಿಯನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 2,250 ರೂ. ನಗದು ಹಾಗೂ ಇಸ್ಪೀಟು ಜುಗಾರಿ ಆಟಕ್ಕೆ ಬಳಸುವ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.