ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣ- ಯುವಕರಿಬ್ಬರು ವಶಕ್ಕೆ
ಉಡುಪಿ ಜು.4(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಿಟ್ಟೂರು ಬಳಿಯ ನಿವಾಸಿ ತಿರುಪತಿ (19), ಕೌಶಿಕ್ ದೇವಾಡಿಗ (20) ಪೊಲೀಸರು ವಶಕ್ಕೆ ಪಡೆದ ಯುವಕರು.
ಉಡುಪಿ ನಗರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರು ಜು.2 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ
ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ರಾಜೀವ್ ನಗರದ ಕೊರಗ ಭವನದ ಬಳಿ ಯುವಕರಿಬ್ಬರು ಗಾಂಜಾ ಸೇವಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಇತರ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿ ಇಬ್ಬರನ್ನು ಮಾದಕ ವಸ್ತು ಸೇವಿಸಿದ ಅನುಮಾನದ ಮೇರೆಗೆ ವಶಕ್ಕೆಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.
ಇದೀಗ ಯುವಕರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಇಬ್ಬರೂ ನಿಷೇಧಿತ ಗಾಂಜಾವನ್ನು ಸೇವಿಸಿರುವುದು ದೃಢಪಟ್ಟಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.