ಸಿದ್ಧರಾಮಯ್ಯ ಸಂಭ್ರಮೋತ್ಸವಕ್ಕೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಬೆಳ್ಳೆ ಶಿವಾಜಿ ಸುವರ್ಣ ಶುಭ ಹಾರೈಕೆ

ಉಡುಪಿ ಆ.2 (ಉಡುಪಿ ಟೈಮ್ಸ್ ವರದಿ): ದಾವಣಗೆರೆಯ ಪ್ಯಾಲೆಸ್ ಮೈದಾನದಲ್ಲಿ ನಾಳೆ  ಆ.3 ನಡೆಯಲಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಹುಟ್ಟುಹಬ್ಬದ ಸಂಭ್ರಮೋತ್ಸವಕ್ಕೆ ಕೆ.ಪಿ.ಸಿ.ಸಿ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಕಾರ್ಯದರ್ಶಿ ಬೆಳ್ಳೆ ಶಿವಾಜಿ ಸುವರ್ಣ ಅವರು ಶುಭ ಹಾರೈಸಿದ್ದಾರೆ.

ತಮ್ಮ ನೆಚ್ಚಿನ ನಾಯಕನ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಶುಭ ಕೋರಿ ಮಾತನಾಡಿದ ಅವರು, ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ಸಹರಿಸುವಂತೆ ಕೋರಿಕೊಂಡಿದ್ದಾರೆ. ಜನಪರ ನಾಯಕನಾಗಿ ಸೇವೆ ಸಲ್ಲಿಸುವ ಪಣತೊಟ್ಟು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರು ಅನೇಕ ಉತ್ತಮ ಯೋಜನೆಗಳ ಮೂಲಕ ಜನರ ಮನ ಗೆದ್ದಿದ್ದಾರೆ.

ಇವರ ಅನ್ನಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳೇ ಇವರ ಜನಪರ ಕಾಳಜಿಗೆ ಉತ್ತಮ ಉದಾಹರಣೆಗಳಾಗಿವೆ. ಇವರು ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಭರಪೂರ ಕೊಡುಗೆಗಳನ್ನು ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಜನನಾಯಕ ಎಂದು ಕರೆಸಿಕೊಳ್ಳುವ ಇವರ 75 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮ ಸಿದ್ದರಾಮೋತ್ಸವದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!