ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ: ರಾಷ್ಟ್ರ ಧ್ವಜ ವಿತರಣೆ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗದ ಆಟೋರಿಕ್ಷಾ ಸ್ಟ್ಯಾಂಡಿನಲ್ಲಿ ನಮ್ಮ ದೇಶದ ಬಾವುಟವನ್ನು ಸಂಸ್ಥೆಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣಿೈ ಯವರು ಸಾರ್ವಜನಿಕರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಆಟೋರಿಕ್ಷಾ ಸ್ಟ್ಯಾಂಡಿನ ಅಧ್ಯಕ್ಷರಾದ ರಿಯಾಜ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಕಾರ್ಯದರ್ಶಿ ಗಿರೀಶ್ ತಂತ್ರಿ ,ಶ್ಯಾಮ್ ಪ್ರಸಾದ್ ಕುಡ್ವ,ಸದಾನಂದ ಶೆಣೆೈ, ಸುಮಿತ್ರಾ ಕೆರೆಮಠ, ಶ್ರೀನಿವಾಸ್ ಉಪಾಧ್ಯ, ಪ್ರಶಾಂತ್ ಕಾಮತ್ ಕುಕ್ಕಿಕಟ್ಟೆ, ನರಸಿಂಹಮೂರ್ತಿ, ಶಶಿಕಾಂತ್ ಶೆಟ್ಟಿ, ಶ್ರೀಲಕ್ಷ್ಮಿ ಆಚಾರ್ಯ, ಸುಭೋದ ರಾವ್ ಮತ್ತಿತರರು ಉಪಸ್ಥಿತರಿದ್ದರು ರವಿರಾಜ್ ಎಚ್ ಪಿ ಸ್ವಾಗತಿಸಿ, ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!