ಅಗ್ನಿವೀರ್ ನೇಮಕಾತಿಯಲ್ಲಿ ಆಯ್ಕೆಯಾಗದ ಕಾರಣ ಮನನೊಂದು ಅಭ್ಯರ್ಥಿ ಆತ್ಮಹತ್ಯೆ

ಉತ್ತರಾಖಂಡ, ಆ.27: ಅಗ್ನಿವೀರ್ ನೇಮಕಾತಿ ರ್ಯಾಲಿಯಲ್ಲಿ ಆಯ್ಕೆಯಾಗದ ಕಾರಣ ಮನನೊಂದು ಅಭ್ಯರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಪೌರಿ ಗರ್ವಾಲ್ ಜಿಲ್ಲೆಯ ನೌಗಾಂವ್ ಕಮಂದ ಗ್ರಾಮದ ನಿವಾಸಿ ಸುಮಿತ್ ಕುಮಾರ್ (23) ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ. ಕೋಟ್ ದ್ವಾರದಲ್ಲಿ ನಡೆದ ಅಗ್ನಿವೀರ್ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಆತ ಇದರಲ್ಲಿ ಆಯ್ಕೆಯಾಗಿರಲಿಲ್ಲ. ವಯಸ್ಸಿನ ಮಿತಿ ಕಾರಣದಿಂದ ಮುಂದಿನ ವರ್ಷ ಮತ್ತೆ ರ್ಯಾಲಿಯಲ್ಲಿ ಭಾಗವಹಿಸಲು ಆತನಿಗೆ ಅವಕಾಶವೂ ಇರಲಿಲ್ಲ. ಇದರಿಂದ ಮನನೊಂದು ಸುಮಿತ್ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!