ಸೈಬರ್ ಸೆಂಟರ್’ನಲ್ಲಿ ನಷ್ಟ- ಕಾಡಿನಲ್ಲಿ ವಿಷ ಸೇವಿಸಿ ಮಾಲಕ ಆತ್ಮಹತ್ಯೆ

ಶಂಕರನಾರಾಯಣ ಸೆ.4(ಉಡುಪಿ ಟೈಮ್ಸ್ ವರದಿ): ಇಲಿ ಪಾಶಣ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರ ನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಧುಕರ ಕೆ.ಬಿ.(31)ಆತ್ಮಹತ್ಯೆ ಮಾಡಿಕೊಂಡವರು.  

ಇವರು ಚಾಲಕ ವೃತ್ತಿ ಮತ್ತು ಸೈಬರ್ ಸೆಂಟರನ್ನು ಇಟ್ಟುಕೊಂಡು ಕೆಲಸ ಮಾಡಿಕೊಂಡಿದ್ದು, ವ್ಯವಹಾರದ ಬಗ್ಗೆ ಸಾಲ ಮಾಡಿಕೊಂಡಿದ್ದರು. ಹಾಗೂ ಆರೋಗ್ಯ ಸರಿ ಇರಲಿಲ್ಲ ಎಂಬ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಸೆ.2 ರಂದು ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಹಾಲಾಡಿಯಲ್ಲಿ ಇಲಿ ಪಾಶಣ ವಿಷ ಸೇವಿಸಿದ್ದರು. ಈ ವೇಳೆ ಅಸ್ವಸ್ಥ ಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ ಎಂಬುದಾಗಿ ಮೃತರ ಅಣ್ಣ ಮಂಜುನಾಥ ಕೆ.ಬಿ.ಎಂಬವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!