ಆತ್ರಾಡಿ: ರಸ್ತೆ ನಿರ್ಮಣ ತಡೆಯಲು ಬಂದ ಮಹಿಳೆಗೆ ಪಂಚಾಯತ್ ಸದಸ್ಯನಿಂದ ಮಾರಣಾಂತಿಕ ಹಲ್ಲೆ

ಹಿರಿಯಡ್ಕ: ಇಲ್ಲಿನ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಖಾಸಗಿ ವ್ಯಕ್ತಿಯವರ ಜಾಗದಲ್ಲಿ ಅಕ್ರಮ ರಸ್ತೆ ನಿರ್ಮಿಸಲು ತಡೆವೊಡ್ಡಿದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಂದು ಸಂಜೆ ನಡೆದಿದೆ. 

ಆತ್ರಾಡಿ ಪರೀಕದ ಪಡುಮನೆ ನಾಗಬನ ನಿವಾಸಿ ಆರತಿ (45) ಹಲ್ಲೆಗೊಳಗಾದ ಮಹಿಳೆ. ಇವರ ಪಟ್ಟಾ ಜಾಗದಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ಮನೆಯವರ ವಿರೋಧದ ನಡುವೆ ಅಕ್ರಮವಾಗಿ ಕಾಂಕ್ರೀಟ್ ರಸ್ತೆ ನಿರ್ಮಿಸಲು ಇಂದು ತಯಾರು ನಡೆಸಿದ್ದರು. ಅಕ್ರಮವಾಗಿ ರಸ್ತೆ ಕಾಮಗಾರಿಗೆ ಪ್ರಾರಂಭಸಿದನ್ನು ಆರತಿ ಪ್ರಶ್ನಿಸಿದರು.

ಸ್ಥಳದಲ್ಲಿದ್ದ ಪಂಚಾಯತ್ ಸದಸ್ಯ ರತ್ನಾಕರ್ ಶೆಟ್ಟಿ ಈಶ್ವರನಗರ ಮತ್ತು ಮನೆ ಪಕ್ಕದ ಚಂದ್ರಹಾಸ ಶೆಟ್ಟಿ, ಸಂತೋಷ ಪೂಜಾರಿ ಆರತಿಯವರಿಗೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಮಾತ್ರವಲ್ಲದೆ ಇವರ ನಡುವೆ ನಡೆದ ವಾಗ್ವಾದದಲ್ಲಿ ರತ್ನಾಕರ್ ಶೆಟ್ಟಿ ಅವರು ಆರತಿಯವರನ್ನು ತಳ್ಳಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದರು.

ಇದನ್ನು ತಡೆಯಲು ಬಂದ ಆರತಿ ಅವರ ಮಗಳಿಗೂ ಹಲ್ಲೆ ನಡಸಿದ್ದಾರೆ. 

ತೀವೃ ಗಾಯಗೊಂಡ ಆರತಿ ಅವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ‌ ಮೊದಲೇ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಆರತಿ ಅವರು ಪಂಚಾಯತ್ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!