ಬೈಂದೂರು/ಬ್ರಹ್ಮಾವರ: ಮಟ್ಕಾ ಜುಗಾರಿ ಅಡ್ಡೆಗೆ ದಾಳಿ- ಇಬ್ಬರು ಪೊಲೀಸರು ವಶಕ್ಕೆ

ಬೈಂದೂರು/ಬ್ರಹ್ಮಾವರ ಸೆ.13 (ಉಡುಪಿ ಟೈಮ್ಸ್ ವರದಿ) : ಬೈಂದೂರು, ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಟ್ಕಾ ಜುಗಾರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಕಂಠ (26), ಸಂಧೀಪ್ (37) ಪೊಲೀಸರು ವಶಕ್ಕೆ ಪಡೆದುಕೊಂಡ ಆರೋಪಿಗಳು. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪುಂದ ಅಂಬಾಗಿಲುವಿನ 5 ಸೆಂಟ್ ಕಾಲೋನಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಮಣಿಕಂಠ ನನ್ನು ವಶಕ್ಕೆ ಪಡೆದು, ಆತನ ಬಳಿ ಇದ್ದ 1,340 ರೂ. ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತೊಂದೆಡೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿಲಿಯಾಣ ಜೆಡ್ಡು ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಸಂಧೀಪ್ ಎಂಬಾತನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ 680 ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೈಂದೂರು ಹಾಗೂ ಬ್ರಹ್ಮಾವರ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ಇಬ್ಬರ ವಿರುದ್ಧ ಬೈಂದೂರು ಹಾಗೂ ಬ್ರಹ್ಮಾವರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!