ಹೆಬ್ರಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು
![](https://udupitimes.com/wp-content/uploads/2022/09/IMG-20220914-WA03123.jpg)
ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಇಂದು ನಡೆದಿದೆ.
ಮುನಿಯಾಲು ನಿವಾಸಿ 25ವರ್ಷದ ಪವನ್ ಮೃತದುರ್ದೈವಿ. ಈತ ಇಂದು ಸಂಜೆ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನು.ಈ ವೇಳೆ ನೀರಿನ ಸೆಳೆತಕ್ಕೆ ಪವನ್ ಕೊಚ್ಚಿಹೋಗಿದ್ದು, ಸುಮಾರು 200 ಮೀ ದೂರದಲ್ಲಿ ಆತನ ಶವ ಪತ್ತೆಯಾಗಿದೆ.