ಕಾರ್ಕಳ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ ಸೆ.17(ಉಡುಪಿ ಟೈಮ್ಸ್ ವರದಿ):  ಮಾನಸಿಕವಾಗಿ ಜೀವನದಲ್ಲಿ ನೊಂದು  ವ್ಯಕ್ತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಾಳದ ಪೆರಲದ್ದ ಬೆಟ್ಟು ಎಂಬಲ್ಲಿ ನಡೆದಿದೆ.

ಮಥಾಯಸ್ ಸಾಂಕ್ತಿಸ್ (55) ಆತ್ಮಹತ್ಯೆ ಮಾಡಿಕೊಂಡವರು.ಅವಿವಾಹಿತರಾಗಿದ್ದ ಮಥಾಯಸ್ ಸಾಂಕ್ತಿಸ್ ಅವರು ಬೇರೆ ಬೇರೆ ಹೋಟೆಲ್ ಗಳನ್ನು ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.

ಅಲ್ಲದೆ ವಿಪರೀತ ಮದ್ಯ ಸೇವನೆ ಮಾಡುವ ಅಭ್ಯಾಸಹೊಂದಿದ್ದ ಅವರುಮಾನಸಿಕವಾಗಿ ಜೀವನದಲ್ಲಿ ನೊಂದು ಸೆ.16 ರ ಮಧ್ಯಾಹ್ನದಿಂದ ಇಂದು ಬೆಳಗ್ಗಿನ ಮಧ್ಯಾವಧಿಯಲ್ಲಿ ತಂದೆ ತಾಯಿಗೆ ಸೇರಿದ ಜಾಗದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಅಣ್ಣ ಜೋನ್ ಸಾಂಕ್ತಿಸ್ ಎಂಬವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!