ಕುಂದಾಪುರ: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

ಕುಂದಾಪುರ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ.

ನಾಗೇಂದ್ರ ಪ್ರಸಾದ್ ಅವರು ಕುಟುಂಬ ಸಮೇತರಾಗಿ ಶಂಕರನಾರಾಯಣ ದೇವಸ್ಥಾನಕ್ಕೆ ಪಾರಾಯಣ ಪೂಜೆಗಾಗಿ ತೆರಳಿದ್ದರು.

ಪೂಜೆ ಮುಗಿಸಿ ಬಂದು ನೋಡುವಾಗ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲ ಗೋಡ್ರೇಜ್ ಕಪಾಟಿನ ಬಾಗಿಲನ್ನು ತೆರೆದು ಅದರೊಳಗಿದ್ದ 50 ಸಾವಿರ ನಗದು, 1/2 ಪವನ್ ತೂಕದ ಒಂದು ಜೊತೆ ಒಲೆ, 3ಸಾವಿರ ರೂ. ಬೆಳ್ಳಿಯ ಅರತಿ ತಟ್ಟೆ, 1ಸಾವಿರ ರೂ. ಬೆಳ್ಳಿಯ ಕುಂಕುಮ ಹಾಕುವ ಭರಣಿ, 600 ರೂ. ಮಗುವಿನ ಕಾಲು ಗೆಜ್ಜೆ, 150 ರೂ. ಮಗುವಿನ ಬೆಳ್ಳಿಯ ಬ್ರಾಸ್ ಲೈಟ್ ಹಾಗೂ 500 ರೂ. ಬೆಳ್ಳಿಯ ಲೋಟ ಸಹಿತ ಒಟ್ಟು 61,250 ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!