ಉಳ್ಳಾಲ: ಬೈಕ್ ಅಪಘಾತ ಸವಾರ ಮೃತ್ಯು, ಸಹಸವಾರ ಗಂಭೀರ
![](https://udupitimes.com/wp-content/uploads/2022/09/Screenshot_2022-09-19-12-29-52-96_40deb401b9ffe8e1df2f1cc5ba480b12.jpg)
ಉಳ್ಳಾಲ, ಸೆ.19: ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಇಂದು ನಸುಕಿನ ಜಾವ ನಡೆದ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
![](httpss://udupitimes.com/wp-content/uploads/2022/09/Screenshot_2022-09-19-12-27-03-97_40deb401b9ffe8e1df2f1cc5ba480b12.jpg)
ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ಬಾರ್ ವೊಂದರಲ್ಲಿ ಮ್ಯಾನೇಜರ್ ಆಗಿದ್ದ, ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಪ್ರತಾಪ್ ಶೆಟ್ಟಿ (32)ಮೃತಪಟ್ಟವರು. ಇವರ ಚಿಕ್ಕಮ್ಮನ ಮಗ ಬಾರ್ ಕೌಂಟರ್ ಬಾಯ್ ಆಗಿರುವ ಅಭಿ ಶೆಟ್ಟಿ (22) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಫರಂಗಿಪೇಟೆಯಲ್ಲಿರುವ ಪ್ರತಾಪ್ ಅವರ ಅಣ್ಣನ ಕೊಠಡಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.