ಉಡುಪಿ: ಬೈಕ್ ಕಳವು ಆರೋಪಿಯ ಬಂಧನ- 5 ಐದು ಬೈಕ್ ವಶಕ್ಕೆ

ಉಡುಪಿ: ರಾಜ್ಯದ ಹಲವೆಡೆ ಬೈಕ್ ಕಳ್ಳತನ ಮಾಡಿದ ಕುಖ್ಯಾತ ಕಳ್ಳನನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಳೆಹೊಸೂರು ನಿವಾಸಿ, ಗೋವಿಂದಪ್ಪ ಗಿರೀಶ ಹೇಮಣ್ಣ ಪೂಜಾರ್ ಬಂಧಿತ ಆರೋಪಿ. ಮಂಡ್ಯ ಕೆ.ಆರ್ ಪೇಟೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಉಡುಪಿ ನಗರದ ಹಲವು ಕಡೆ ಬೈಕ್ ಕಳ್ಳತನ ನಡೆದಿತ್ತು. ಬೀಡಿನಗುಡ್ಡೆ, ಉಡುಪಿ ಕೃಷ್ಣಮಠ ಸಮೀಪ ವಿದ್ಯೋದಯ ಶಾಲೆ ಬಳಿ ನಿಲ್ಲಿಸಿದ್ದ ಬೈಕುಗಳನ್ನು ಕಳ್ಳತನ ಮಾಡಲಾಗಿತ್ತು.

ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ಉಡುಪಿ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ರಾಜ್ಯದ ನಾನಾ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಆರೋಪಿಯಿಂದ ಸುಮಾರು 5 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!